Thursday, August 16, 2018

**RSGE**::: ಆಗಸ್ಟ್ ೧೭ರ ರಜೆ ಕುರಿತ ಆದೇಶ

ಕರ್ನಾಟಕ ಸರ್ಕಾರ
ಸಂಖ್ಯೆ: ಸಿಆಸುಇ 36 ಹೆಚ್ಹೆಚ್ಎಲ್ 2018
ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ: 16.08.2018
ಅಧಿಸೂಚನೆ
ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಇವರ
ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಪ್ರಸ್ತುತ ರಾಜ್ಯದಲ್ಲಿ ಹಲವೆಡೆ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಇರುವ ಕಾರಣ ತುರ್ತು
ಪರಿಸ್ಥಿತಿಯನ್ನು ನಿಭಾಯಿಸುವ ಮತ್ತು ಪರಿಹಾರ ಒದಗಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವವರನ್ನು
ಹೊರತುಪಡಿಸಿ ಉಳಿದವರಿಗೆ ಅನ್ವಯಿಸುವಂತೆ ದಿವಂಗತರ ಗೌರವಾರ್ಥವಾಗಿ ದಿನಾಂಕ: 17.08.2018 ರಂದು
ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಛೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ
(ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ಸೇರಿದಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ.
ಸಂಸ್ಥೆಗಳು ಒಳಗೊಂಡಂತೆ ರಜೆ ಘೋಷಿಸಿದೆ.
ದಿನಾಂಕ: 16.08.2018 ರಿಂದ 22.08.2018 ರವರೆಗೆ (ಎರಡೂ ದಿನಗಳು ಸೇರಿದಂತೆ) ಏಳು
ದಿನಗಳು ರಾಜ್ಯಾದ್ಯಾಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ
ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ
ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.
ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ
ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ, ೧
&AMM
(ನವೀನ್ ಜನಸ್ಪು
ಸರ್ಕಾರದ ಅಧೀನ ಕಾರ್ಯದರ್ಶಿಗಳು,
ಸಿಆಸುಇ(ರಾಜ್ಯ ಶಿಷ್ಠಾಚಾರ)
ಇವರಿಗೆ:
1) ಮಹಾಲೇಖಪಾಲರು, ಕರ್ನಾಟಕ, ಬೆಂಗಳೂರು. |
2) ಮಾನ್ಯ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗಳು, ರಾಜ ಭವನ, ಬೆಂಗಳೂರು.
3) ಸರ್ಕಾರದ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು.
4) ಮುಖ್ಯ ಮಾಹಿತಿ ಆಯುಕ್ತರು, ಮಾಹಿತಿ ಆಯೋಗ, ಬೆಂಗಳೂರು
5) ರಿಜಿಸ್ಟ್ರಾರ್ ಜನರಲ್, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು.
6) ರಿಜಿಸ್ಟ್ರಾರ್, ಕರ್ನಾಟಕ ಲೋಕಾಯುಕ್ತ, ಬೆಂಗಳೂರು
7) ರಿಜಿಸಾರ್, ಕರ್ನಾಟಕ ಆಡಳಿತ ನ್ಯಾಯಮಂಡಳಿ, ಬೆಂಗಳೂರು

No comments:

Post a Comment

ಅನಿಸಿಕೆ ತಿಳಿಸಿ

ಹೆಚ್ಚು ಓದಿದವು