Thursday, October 25, 2018

**RSGE**::: ಸರ್ಕಾರಿ ಕಾರ್ನರ್​

ನಾನು 3 ವರ್ಷದಿಂದ ಬಳ್ಳಾರಿ ನ್ಯಾಯಾಂಗ ಇಲಾಖೆಯಲ್ಲಿ ಬೆರಳಚ್ಚು ನಕಲುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಈಗ ಕೆಪಿಎಸ್​ಸಿ ನಡೆಸಿದ ಪರೀಕ್ಷೆಯಲ್ಲಿ ಬೆರೆಳಚ್ಚುಗಾರ ಹುದ್ದೆಗೆ ಆಯ್ಕೆ ಆಗಿದ್ದು, ಒಂದು ವೇಳೆ ಕಾರಣಾಂತರದಿಂದ ಈ ಹುದ್ದೆ ರದ್ದುಪಡಿಸಿದರೆ ನಾನು ನ್ಯಾಯಾಂಗ ಇಲಾಖೆಗೆ ಮರಳಿ ಕರ್ತವ್ಯಕ್ಕೆ ಹಾಜರಾಗಬಹುದೇ? ಎಷ್ಟು ವರ್ಷಗಳ ಒಳಗೆ ನ್ಯಾಯಾಂಗ ಇಲಾಖೆಗೆ ಮರಳಲು ಅವಕಾಶವಿರುತ್ತದೆ?
| ಎಚ್. ಆನಂದ್ ಗಂಗಾವತಿ, ಕೊಪ್ಪಳ
ಕರ್ನಾಟಕ ಸರ್ಕಾರಿ ಸೇವಾ (ನೇರ ನೇಮಕಾತಿ) ನಿಯಮಾ ವಳಿಯ 1977ರ ನಿಯಮ 11ರ ಮೇರೆಗೆ ನೀವು ಅನುಮತಿ ಪಡೆದು ಅರ್ಜಿ ಸಲ್ಲಿಸಿ ಬೆರಳಚ್ಚುಗಾರ ಹುದ್ದೆಗೆ ಆಯ್ಕೆಯಾದರೆ ಈ ಹುದ್ದೆಯ ಆದೇಶ ಪಡೆದ ಮೇಲೆ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ ನಿಯಮ 252ಬಿ ರಂತೆ ಕರ್ತವ್ಯ ದಿಂದ ಬಿಡುಗಡೆ ಹೊಂದಬೇಕಾಗುತ್ತದೆ. ಹೀಗೆ ಬಿಡುಗಡೆ ಹೊಂದುವ ಮೊದಲು ನೀವು ನಿಮ್ಮನೇಮಕಾತಿ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ ನಿಯಮ 2ರ ಮೇರೆಗೆ ನಿಮ್ಮ ಹುದ್ದೆಯ ಹಕ್ಕನ್ನು (ಲೀನ್) 2 ವರ್ಷದ ವರೆಗೆ ಕಾಯ್ದಿರಿಸಬೇಕೆಂದು ವಿನಂತಿಸಬೇಕು. ಆಕಸ್ಮಿಕವಾಗಿ ಕೆಪಿಎಸ್​ಸಿಯ ಬೆರಳಚ್ಚುಗಾರರ ಹುದ್ದೆ ರದ್ದಾದಲ್ಲಿ 2 ವರ್ಷದ ಒಳಗೆ ನೀವು ಪುನಃ ನ್ಯಾಯಾಂಗ ಇಲಾಖೆಗೆ ಮರಳಿ ಕರ್ತವ್ಯಕ್ಕೆ ಹಾಜರಾಗಬಹುದು. ವಿವರಗಳಿಗೆ ಇದೇ ಲೇಖಕರ ‘ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು’ ಪುಸ್ತಕ ನೋಡಬಹುದು.

No comments:

Post a Comment

ಅನಿಸಿಕೆ ತಿಳಿಸಿ

ಹೆಚ್ಚು ಓದಿದವು