Thursday, October 25, 2018

**RSGE**::: ಸರ್ಕಾರಿ ಕಾರ್ನರ್​

ಭೂಮಾಪನ ಇಲಾಖೆಯಲ್ಲಿ ಭೂಮಾಪಕರಾಗಿದ್ದ ನನ್ನ ತಂದೆ 2018ರ ಆ.18ರಂದು ಆಕಸ್ಮಿಕವಾಗಿ ನಿಧನರಾದರು. ನಾನು ಸ್ನಾತಕೋತ್ತರ ಪದವೀಧರನಾಗಿದ್ದು, ಪ್ರಥಮ ದರ್ಜೆ ಸಹಾಯಕ ಹುದ್ದೆ ನೀಡಲು ಕೋರಿದಾಗ ಸಕ್ಷಮ ಅಧಿಕಾರಿಯು ದ್ವಿತೀಯ ದರ್ಜೆ ಸಹಾಯಕ ಹುದ್ದೆ ಅಂಗೀಕರಿಸಿದ್ದಾರೆ. ಸದ್ಯ ದ್ವಿತೀಯ ದರ್ಜೆ ಸಹಾಯಕನಾಗಿರುವ ನಾನು ಪ್ರಥಮದರ್ಜೆ ಸಹಾಯಕ ಹುದ್ದೆಗೆ ನಿಯೋಜಿಸುವಂತೆ ಮತ್ತೆ ಮನವಿ ಸಲ್ಲಿಸಬಹುದೇ? ಇಲಾಖೆ ಕೈಗೊಂಡ ನಿರ್ಧಾರ ಕ್ರಮಬದ್ಧವಾಗಿದೆಯೇ?
| ಬಿ.ಕೆ. ಕುಲಕರ್ಣಿ ವಿಜಯಪುರ
ಕರ್ನಾಟಕ ಸರ್ಕಾರಿ ಸೇವಾ (ಅನುಕಂಪದ ಮೇರೆಗೆ ನೇಮಕ) ನಿಯಮಾವಳಿ 1996ರ ನಿಯಮ 3ರ ಪ್ರಕಾರ ಅನುಕಂಪದ ಮೇರೆಗೆ ನೇಮಕವಾಗಲು ನಿಗದಿತ ವಿದ್ಯಾರ್ಹತೆ ಹೊಂದಿದ್ದರೆ ಅರ್ಹರಾಗುತ್ತಾರೆ. 2017ರ ಅ.27ರ ಸರ್ಕಾರಿ ಸುತ್ತೋಲೆ ಸಂಖ್ಯೆ ಸಿಆಸುಇ 105, ಸೇಅನೇ 2017ರ ಪ್ರಕಾರ ಅನುಕಂಪದ ಆಧಾರದ ಮೇಲೆ ನೇಮಕಾತಿ ಸಂದರ್ಭ ಅರ್ಜಿದಾರರ ಅರ್ಜಿ ಪರಿಗಣಿಸುವಾಗ ಆತನ ವಿದ್ಯಾರ್ಹತೆಗೆ ಅನುಸಾರವಾಗಿಯೇ ಗ್ರೂಪ್ ಸಿ ಅಥವಾ ಡಿ ಹುದ್ದೆಗೆ ನೇಮಕಾತಿ ಆದೇಶ ಹೊರಡಿಸಬೇಕೆಂದು ಸೂಚಿಸಲಾಗಿರುತ್ತದೆ. ಹಾಗಾಗಿ ನೀವು ಮತ್ತೆ ನೇಮಕಾತಿ ಪ್ರಾಧಿಕಾರಕ್ಕೆ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವಂತೆ ಮನವಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ‘ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ’ ಪುಸ್ತಕ ನೋಡಬಹುದು.

No comments:

Post a Comment

ಅನಿಸಿಕೆ ತಿಳಿಸಿ

ಹೆಚ್ಚು ಓದಿದವು