Thursday, November 08, 2018

Kcsr Useful information

ನಾಮನಿರ್ದೇಶನದ  ಪ್ರಾಮುಖ್ಯತೆ
------------------------------------
  ಸರ್ಕಾರಿ  ನೌಕರ  GPF , KGID , LIC , FBF , KGIS , DCRG  , Family pension , ಅಲ್ಲದೆ   SB a/c , ಮತ್ತು  FD a/c ಇತ್ಯಾದಿಗಳಿಗೆ ಎಲ್ಲದಕ್ಕೂ  ನಾಮನಿರ್ದೇಶನ( Nominee ) ಕಡ್ಡಾಯವಾಗಿ ಮಾಡಲೇಬೇಕಾಗುತ್ತದೆ .
ಕೇವಲ ನಾಮನಿರ್ದೇಶನ  ಮಾಡಿದರೆ  ಸಾಲದು , ಅದನ್ನು  ಸಂದರ್ಭಾನುಸಾರ  Update  ಮಾಡುತ್ತಾ ಇರಬೇಕು .
  ನಾಮನಿರ್ದೇಶನಗಳನ್ನು  ಒಬ್ಬರ  ಹೆಸರಿನಲ್ಲಿಯೇ  ಮಾಡಬೇಕೆಂದೇನೂ
ಇಲ್ಲ . ಒಬ್ಬನಿಗಿಂತ  ಹೆಚ್ಚಿನ ವ್ಯಕ್ತಿಗಳನ್ನು  ನಾಮನಿರ್ದೇಶಿತರನ್ನಾಗಿ
ಮಾಡಬಹುದು . ಹೆಚ್ಚಿನ  ವ್ಯಕ್ತಿಗಳನ್ನು ಮಾಡುವಾಗ  ತಾನು  ಮೃತಪಟ್ಟಲ್ಲಿ
ಯಾವ ವ್ಯಕ್ತಿಗಳಿಗೆ  ಎಷ್ಟೆಷ್ಟು  ಪಾಲು ಹಣ ಕೊಡಬೇಕು  ಎಂಬುದನ್ನು ಕೂಡ  ದಾಖಲಿಸಬೇಕು. ನೌಕರನ  ಕೇಂದ್ರಸ್ಥಾನ
_____________________
KCSR ನಿಯಮ 513 ರ  ಪ್ರಕಾರ  ಕೇಂದ್ರ ಸ್ಥಾನ   ಎಂದರೆ   ತಾನು  ಕರ್ತವ್ಯ  ನಿರ್ವಹಿಸುವ  ಕಾರ್ಯಸ್ಥಳದಿಂದ  8 ಕಿ.ಮೀ. ದೂರವನ್ನು   ಕೇಂದ್ರ ಸ್ಥಾನ ವೆಂದು   ಕರೆಯುವರು .
8 ಕಿ. ಮೀ . ಮೀರಿ  ಬೆಳೆಸಿದ  ಪ್ರಯಾಣಕ್ಕೆ  ಪ್ರಯಾಣ ಭತ್ಯೆ  ಪಡೆಯಬಹುದು .
ಪ್ರವಾಸದ  ಕಾಲದಲ್ಲಿ  ಕೇಂದ್ರಸ್ಥಾನ ದಿಂದ 8 ಕಿ. ಮೀ .ಒಳಗೆ  ತಂಗುವುದನ್ನು  ಕೇಂದ್ರಸ್ಥಾನದಲ್ಲಿ   ತಂಗುವುದಾಗಿ ಭಾವಿಸಬೇಕು .
ದಿನದ 24 ಗಂಟೆಯೂ  ಸರ್ಕಾರಿ ನೌಕರ *

-------------------------------
K C S R ನಿಯಮಾವಳಿಯ  ನಿಯಮ  26( ಎ ) ಪ್ರಕಾರ  ಸರ್ಕಾರಿ ನೌಕರನು  ದಿನವಿಡಿ  ಅಂದರೆ 24 ಗಂಟೆಯೂ ಆತನಿಗೆ  ಸಂಬಳ ನೀಡುತ್ತಿರುವ  ಸರ್ಕಾರದ  ಕರ್ತವ್ಯಕ್ಕಾಗಿಯೇ  ಇರಬೇಕಾಗುತ್ತದೆ .

ಸರ್ಕಾರ  ರಜಾ ದಿನದಂದು  ಕರ್ತವ್ಯ ನಿರ್ವಹಿಸಲು  ಆದೇಶಿಸಿದರೆ
ಅದನ್ನು  ತಿರಸ್ಕರಿಸಲು  ಬರುವುದಿಲ್ಲ . ಉದಾಹರಣೆಗೆ  ಒಬ್ಬ  ವ್ಯಕ್ತಿಯು ಸಂಜೆ 5-30 ಕ್ಕೆ  ವಯೋ ನಿವೃತ್ತಿ  ಹೊಂದಿ ,  ಅದೇ ದಿನ ರಾತ್ರಿ   11-30ಕ್ಕೆ
ಮೃತಪಟ್ಟ ಎಂದು ಭಾವಿಸೋಣ , K C S R ನಿಯಮಾವಳಿಯ  ನಿಯಮ 8 ( 14 )ರ ಪ್ರಕಾರ  ದಿನ ಎಂದರೆ  ಮಧ್ಯರಾತ್ರಿಯಲ್ಲಿ   ಆರಂಭಗೊಳ್ಳುತ್ತದೆ
ಮತ್ತು  ಕೊನೆಗೊಳ್ಳುತ್ತದೆ .
ಏಕೆಂದರೆ , X  ಎಂಬ ನೌಕರ  ದಿನಾಂಕ 30- 09 - 1993 ರಂದು   ಸಂಜೆ 5-30 ಕ್ಕೆ ವಯೋ ನಿವೃತ್ತಿ ಹೊಂದಿ ರಾತ್ರಿ  10-30 ಕ್ಕೆ ನಿಧನರಾದರು . ಈ
KAT ಯು  ಅರ್ಜಿ ಸಂಖ್ಯೆ  : 3452 ,98 ರ  ದಿನಾಂಕ 03-09-1998 ರಂದು ಈ ವ್ಯಕ್ತಿಯು ಸೇವಾವಧಿಯಲ್ಲಿ     ಮೃತಪಟ್ಟಿರುವುದರಿಂದ
ರಾಜ್ಯ ಸರ್ಕಾರಿ ನೌಕರರ ಸಮೂಹ ವಿಮಾ ಯೋಜನೆ  ನಿಯಮಗಳು
1981 ರ ನಿಯಮ  21(2) ರ ಪ್ರಕಾರ 3 ತಿಂಗಳ ಅವಧಿಯೊಳಗೆ
ಸಮೂಹ ವಿಮಾ ಹಣವನ್ನು ಪಾವತಿಸಲು  ಆದೇಶಿಸಿದೆ . Exemption on professional  Tax
ವೃತ್ತಿ  ತೆರಿಗೆಯಿಂದ  ವಿನಾಯತಿ
~~~~~~~~~~~~~
ಸರ್ಕಾರದ   ಅಧಿಸೂಚನೆ  ಸಂಖ್ಯೆ  ಎಫ್.ಡಿ. 12
ಸಿ.ಪಿ.ಟಿ.94( ¡¡¡ )ದಿನಾಂಕ  30 - 2 - 1994 ರ  ಪ್ರಕಾರ
ಒಂದೇ  ಮಗುವಿದ್ದು  ಸಂತಾನಹರಣ   ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರಿಗೆ   ( ದಂಪತಿಗಳ  ಪೈಕಿ  ಒಬ್ಬರಲ್ಲಿ )  ದಿನಾಂಕ  01 - 04 - 1994  ರಿಂದ  ವೃತ್ತಿ  ತೆರಿಗೆ  ವಿನಾಯತಿ ನೀಡಲಾಗಿದೆ .
ಮಹಿಳಾ  ನೌಕರರಿಗೆ  *
------------------------------------
  ಮಹಿಳಾ ನೌಕರರು   ಮದುವೆಯಾಗಿ   ಗಂಡನ ಮನೆಯಲ್ಲಿ 
ವಾಸವಾಗಿದ್ದರೂ  ಸಹ  ಮಹಿಳಾ  ನೌಕರರ  ತಂದೆ - ತಾಯಿ ಈ ನೌಕರರ
ಅವಲಂಬಿತರಾಗಿದ್ದಲ್ಲಿ  ಸರ್ಕಾರದ  ಅಧಿಸೂಚನೆ  ಸಂಖ್ಯೆ ಸಿ.ಆ.ಸು.ಇ.
26/ ಎಸ್ . ಎಂ . ಆರ್ 2011 ದಿನಾಂಕ 27- 03- 2012 ರಂತೆ ಪೋಷಕರ  ಮಾಸಿಕ  ಆದಾಯ 6000/- ರೂ  ಮೀರದಿದ್ದರೆ  ಅಂತವರು ವೈದ್ಯಕೀಯ ಮರುವೆಚ್ಛ  ಪಾವತಿ ಮಾಡಿಕೊಳ್ಳುವ ಅವಕಾಶವಿದೆ.
ಅಸಾಧಾರಣ ರಜೆ ( Extraordinary Leave )
_________________

ಸರ್ಕಾರಿ  ನೌಕರನು ಅವನ  ಹಕ್ಕಿನಲ್ಲಿ  ಯಾವುದೇ  ವಿಧವಾದ  ರಜೆ  ಇಲ್ಲದಿದ್ದಾಗ , ಅಥವಾ  ವಿಶೇಷ ಸನ್ನಿವೇಶಗಳಲ್ಲಿ  KCSR  ನಿಯಮ  117 ( ಎ ) ರ ಪ್ರಕಾರ  ಅಸಾಧಾರಣ  ರಜೆಯನ್ನು  ಪಡೆಯಬಹುದಾಗಿರುತ್ತದೆ .
        ಆದರೆ  ಈ  ಅಸಾಧಾರಣ  ರಜೆಯ  ಅವಧಿಗೆ  ಯಾವುದೇ  ವೇತನ  ಭತ್ಯೆಗಳು  ಲಭ್ಯವಾಗುವುದಿಲ್ಲ .

   ಯಾವುದೇ  ರಜೆ  ಇಲ್ಲದ  ನೌಕರರು  ಕ್ಯಾನ್ಸರ್  ,  ಕುಷ್ಠ  ,  ಕ್ಷಯ ,  ಮಾನಸಿಕ  ಅಸ್ವಸ್ಥತೆ   ಇತ್ಯಾದಿ  ಮಾರಕ  ಖಾಯಿಲೆಗಳಿಗೆ   ತುತ್ತಾದಲ್ಲಿ   ವೈದ್ಯಕೀಯ
ಪ್ರಮಾಣಪತ್ರದ  ಆಧಾರದ  ಮೇಲೆ  18 ತಿಂಗಳ  ಅವಧಿಗೆ  ಅಸಾಧಾರಣ  ರಜೆ  ಮಂಜೂರು ಮಾಡಲು ಅವಕಾಶವಿದೆ .
KCSR  ನಿಯಮ 117 ( ಬಿ )( ¡¡¡ ) ರ  ಪ್ರಕಾರ  ಸತತ ಮೂರು  ವರ್ಷ  ಸೇವೆ  ಸಲ್ಲಿಸಿದ  ನೌಕರರಿಗೆ  ಉನ್ನತ ವ್ಯಾಸಂಗಕ್ಕೆ  2 ವರ್ಷ , ಡಾಕ್ಟರೇಟ್  ಕೋರ್ಸ್ ಗಾಗಿ 3 ವರ್ಷಅಸಾಧಾರಣ  ರಜೆ  ಪಡೆಯಲು ಅವಕಾಶವಿದೆ .ರಿಮೂವಲ್ -  ಡಿಸ್ಮಿಸಲ್ ಗೂ  ಇರುವ  ವ್ಯತ್ಯಾಸ  ? ?
_____________________
ರಿಮೂವಲ್ ( ಕೆಲಸದಿಂದ  ತೆಗೆದುಹಾಕುವುದು).  ಯಾವುದೇ  ಆರ್ಥಿಕ ಸೌಲಭ್ಯವೂ  ದೊರೆಯುವುದಿಲ್ಲ , ಆದರೆ  ಮತ್ತೊಂದು  ಹುದ್ದೆಗೆ
ಆಯ್ಕೆಯಾಗಬಹುದು .
ಆದರೆ  ಡಿಸ್ಮಿಸಲ್ ( ಕೆಲಸದಿಂದ  ವಜಾ ಮಾಡುವುದು ) . ಈ ಆದೇಶವಾದಾಗ  ಆರ್ಥಿಕ  ಸೌಲಭ್ಯವೂ  ಸಿಗುವುದಿಲ್ಲ , ಹಾಗು  ಬೇರೆ ಹುದ್ದೆಗೆ
ನೇಮಕಾತಿಯು  ಸಿಗುವುದಿಲ್ಲ .ಅಮಾನತ್ತು  ( Suspension )
____________________
1)ಒಬ್ಬ ನೌಕರರನ್ನು  ಅಮಾನತ್ತು ಮಾಡುವಾಗ ಮುಂಚಿತವಾಗಿ ನೋಟೀಸು ಕೊಡಬೇಕೆಂದು ನಿಯಮವಿಲ್ಲ .
2) ಅಮಾನತ್ತು ಅವಧಿಯಲ್ಲಿ ಕಡ್ಡಾಯವಾಗಿ ಶೇಕಡಾ 50% ಜೀವನಾಧಾರ ಭತ್ಯೆ  ಕೊಡಬೇಕು .
3) ಅಮಾನತ್ತನ್ನು  ಗರಿಷ್ಠ 6 ತಿಂಗಳೊಳಗಾಗಿ  ಅಂತಿಮ  ಆದೇಶ ಹೊರಡಿಸಬೇಕು . ಮುಂದುವರಿಸಬೇಕಾದರೆ ಸರ್ಕಾರಕ್ಕೆ  ವರದಿ ಸಲ್ಲಿಸಬೇಕು .
4) ಯಾವುದಾದರೂ  ಕಾರಣದಿಂದ 48 ಗಂಟೆ ಮೀರಿದ  ಅವಧಿಯವರಿಗೆ ಅಭಿರಕ್ಷೆಯಲ್ಲಿ  ( ಪೋಲಿಸ್ ಕಷ್ಟಡಿ ) ತಡೆಹಿಡಿದಿದ್ದರೆ  ಸ್ವಯಂಚಾಲಿತವಾಗಿ  ಅಮಾನತ್ತು ಜಾರಿಯಾಗುತ್ತದೆ .
5)  ವಿಚಾರಣೆ  ಬಾಕಿ ಇರುವಾಗ ನೌಕರರನನ್ನು  ಅಮಾನತ್ತುಗೊಳಿಸಬಹುದು. ಆದರೆ,  ಅಮಾನತ್ತು ದಂಡನೆ  ಅಲ್ಲ.
6) ತಿಂಗಳಿಗೂ  ಮೀರಿದ ಅವಧಿಗೆ  ಅಮಾನತ್ತು ಮುಂದುವರಿದ ಪ್ರಕರಣಕ್ಕೆ ಶೇಕಡಾ 75% ,  ಹಾಗು ವರ್ಷಕ್ಕೂ  ಮೀರಿದ ಅವಧಿಗೆ  ಶೇ100% ರಷ್ಟು ಸಂಬಳ ಪಾವತಿಸಬೇಕು .
7) ಅಮಾನತ್ತಾದ  ನೌಕರ  ವಿಚಾರಣೆಯಿಂದ  ಆರೋಪ ಮುಕ್ತನಾದಲ್ಲಿ  ಪೂರ್ಣ  ವೇತನ  ನೀಡಬೇಕು .
8 ) ಅಮಾನತ್ತು ನಂತರ ಶಿಸ್ತು ನಡವಳಿಕೆ  ನಡೆಸದಿದ್ದಲ್ಲಿ  ಅದು  ನ್ಯಾಯಸಮ್ಮತವಲ್ಲ .
9 ) ಲಘು ದಂಡನೆ  ವಿಧಿಸುವುದೊಂದಿಗೆ  ಅಮಾನತ್ತು ಅವಧಿ ಕೊನೆಗೊಂಡಾಗ ಈ ಅವಧಿಗೆ  ಪೂರ್ಣ ವೇತನ  ಮತ್ತು ಭತ್ಯೆಗಳನ್ನು ಕೊಡಬೇಕು .
10 ) ' ಬಿ ' ಗುಂಪಿನ  ಅಧಿಕಾರಿಗಳನ್ನು  ಅಮಾನತ್ತುಗೊಳಿಸುವ  ಅಧಿಕಾರ - ಜಿಲ್ಲಾಧಿಕಾರಿ  ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗೆ  ಅಧಿಕಾರ ಇರುವುದಿಲ್ಲ .

No comments:

Post a Comment

ಅನಿಸಿಕೆ ತಿಳಿಸಿ

ಹೆಚ್ಚು ಓದಿದವು